ಹುಕ್ಕೇರಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆಗೆ ಹ್ರತ್ಪೂರ್ವಕ ಶುಭಾಶಯಗಳು

ಸನ್ 2012ರಲ್ಲಿ ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಾಧ್ಯಮ ಮಹಾಮೇಳದಲ್ಲಿ ಬಾಬು ಸುಂಕದ ಅವರನ್ನು ಸನ್ಮಾನಿಸಿದ ದೃಶ್ಯ

ಇಂದಿನ ದಿನಾಚರಣೆ ಕೇಳಿ ನೋಡಿ ನನಗೆ ಸನ್ 2012ರಲ್ಲಿ ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ 65 ನೇ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧಿವೇಶನ ನೆನಪಾಯಿತು.

    ಸಂಘದ ಈಗಿನ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ಜೊತೆಗೆ ಆಗ ನಾನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷನಾಗಿದ್ದೆ.

        ಸನ್ 2012 ಅಕ್ಟೋಬರ್ ದಿ.12, 13 & 14 ರಂದು ತುಮಕೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಾಧ್ಯಮ ಮಹಾಮೇಳ ಅವಿಸ್ಮರಣೀಯ. ತುಮಕೂರ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಗಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ, ತುಮಕೂರ ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ (ಈಗ ಗ್ರಹ ಮಂತ್ರಿ ಆಗಿರುವರು), ಕೇಂದ್ರ ಸರಕಾರದ ರೈಲ್ವೆ ಸಚಿವರಾಗಿದ್ದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ ಮತ್ತಿತರರಿದ್ದರು.

     ಸಮಾರೋಪ ಸಮಾರಂಭದಲ್ಲಿ ನನ್ನನ್ನು ಸಂಘದಿಂದ ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಅಂಬಿಕಾ ಸೋನಿ, ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ (ಈಗ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ.), ತುಮಕೂರ ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ, ವಿಧಾನ ಪರಿಷತ್ ಸದಸ್ಯರಾಗಿದ್ದ ಡಾ. ಎಂ.ಆರ್. ಹುಲಿನಾಯ್ಕರ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಉಪಾಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಸಂಘದ ರಾಜ್ಯ ಅಧ್ಯಕ್ಷ ಗಂಗಾಧರ ಮೊದಲಿಯಾರ್, ಸಹ ಉಪಾಧ್ಯಕ್ಷ ಶಿವಾನಂದ ತಗಡೂರ ಮತ್ತಿತರರು ಸನ್ಮಾನಿಸಿದರು.

Join Our WhatsApp Channel
Join Now

Leave a Reply

Your email address will not be published. Required fields are marked *

error: Content is protected !!
This website uses cookies to ensure you get the best experience on our website. Details
Decline
Accept